ಪೊಲೀಸ್ ವರಿಷ್ಠರೊಂದಿಗೆ ಸಿಎಂ ಸಿದ್ದರಾಮಯ್ಯ ರಾತ್ರಿ ಹೊತ್ತು ದಿಡೀರ್ ಸಭೆ

ಶನಿವಾರ, 16 ಸೆಪ್ಟಂಬರ್ 2017 (09:04 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ತಮ್ಮ ನಿವಾಸದಲ್ಲಿ ರಾತ್ರಿ ದಿಡೀರ್ ಸಭೆ ನಡೆಸಿದ್ದಾರೆ.

 
ತಮ್ಮ ನಿವಾಸಕ್ಕೆ ರಾಜ್ಯ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕರೆಸಿಕೊಂಡ ಸಿಎಂ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಮುಖ್ಯವಾಗಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ಮತ್ತು ಮುಂಬರುವ ಚುನಾವಣೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಗೌರಿ ಲಂಕೇಶ್ ಹಂತಕರ ಕುರಿತು ಇದುವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ಹೀಗಾಗಿ ತ್ವರಿತವಾಗಿ ಪ್ರಕರಣ ಮುಂದುವರಿಸುವಂತೆ ಅಧಿಕಾರಿಗಳ ಖಡಕ್ ಸೂಚನೆ ಕೊಟ್ಟಿದ್ದಾರೆಂದು ಮೂಲಗಳು ಹೇಳಿವೆ.

ಇದನ್ನೂ ಓದಿ.. ರವಿಶಾಸ್ತ್ರಿ, ವಿರಾಟ್ ಕೊಹ್ಲಿ ಬಣ್ಣ ಬಯಲು ಮಾಡಿದ ಸೆಹ್ವಾಗ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ