ಇಂದಿರಾ ಕ್ಯಾಂಟೀನ್ ಬಗ್ಗೆ ಶುಭ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ

ಮಂಗಳವಾರ, 29 ಆಗಸ್ಟ್ 2017 (12:05 IST)
ಬೆಂಗಳೂರು: ಬೆಂಗಳೂರಿನ ಬಿಬಿಎಂಪಿ ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆದ ರಾಜ್ಯ ಸರ್ಕಾರ ಇದನ್ನು ಈಗ ರಾಜ್ಯಾದ್ಯಂತ ವಿಸ್ತರಿಸಲು ಚಿಂತನೆ ನಡೆಸಿದೆಯಂತೆ.

 
ಅಗ್ಗದ ದರದಲ್ಲಿ ಊಟ ಮತ್ತು ಉಪಾಹಾರ ನೀಡುವ ಇಂದಿರಾ ಕ್ಯಾಂಟೀನ್ ಬೆಂಗಳೂರಿನಲ್ಲಿ ಭಾರೀ ಜನಪ್ರಿಯತೆ ಗಳಿಸಿದೆ. ಇದೇ ಯಶಸ್ಸಿನ ಖುಷಿಯಲ್ಲಿ ಸಿಎಂ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಮೈಸೂರಿಗೂ ವಿಸ್ತರಿಸುವುದಾಗಿ ಹೇಳಿದ್ದಾರೆ.

ಈ ಮೂಲಕ ಹಂತ ಹಂತವಾಗಿ ರಾಜ್ಯದಾದ್ಯಂತ ಯೋಜನೆ ವಿಸ್ತರಿಸಲು ರಾಜ್ಯ ಸರ್ಕಾರ ಹೆಜ್ಜೆ ಇಡುತ್ತಿದೆ. ಇದರೊಂದಿಗೆ ತಮ್ಮ ಸರ್ಕಾರದ ಜನಪ್ರಿಯ  ಯೋಜನೆಯನ್ನು ಮತ್ತಷ್ಟು ಪ್ರಚುರಪಡಿಸಲು ಸಿಎಂ ಯೋಜನೆ ರೂಪಿಸಿದ್ದಾರೆ.

ಇದನ್ನೂ ಓದಿ.. ಬಹುಭಾಷಾ ತಾರೆಗೆ ಲೈಂಗಿಕ ಕಿರುಕುಳ ಪ್ರಕರಣ: ದಿಲೀಪ್ ಜಾಮೀನು ತಿರಸ್ಕೃತ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ