ಸಿಎಂ ಸಿದ್ದರಾಮಯ್ಯ ಬಾದಾಮಿ ಸವಿಯೋದು ಗ್ಯಾರಂಟಿ?!
ಈ ಮೊದಲು ಬಿ ಫಾರಂ ಕೇಳಲು ಬಂದಿದ್ದ ಬಾದಾಮಿ ಶಾಸಕ ಚಿಮ್ಮನಕಟ್ಟಿಗೆ ಸಿಎಂ ಸಿದ್ದರಾಮಯ್ಯ, ನಾನು ಸ್ಪರ್ಧಿಸಿದರೆ ನಿನಗೆ ಟಿಕೆಟ್ ಇಲ್ಲ ಎಂದಿದ್ದರು. ಆ ಮೂಲಕ ಬಾದಾಮಿಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ್ದರು.
ಇದೀಗ ನೀರಾವರಿ ಸಚಿವ ಎಂಬಿ ಪಾಟೀಲ್ ಕೂಡಾ ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಹೇರಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ರಾಹುಲ್ ಗಾಂಧಿ ನಿವಾಸದಲ್ಲಿ ಈ ವಿಚಾರ ನಿರ್ಧಾರವಾಗಲಿದೆ ಎನ್ನಲಾಗಿದೆ. ಕಾಂಗ್ರೆಸ್ ಉಳಿದ ಐದು ಸ್ಥಾನಗಳಿಗೆ ಸ್ಪರ್ಧಿಗಳ ಘೋಷಣೆ ಮಾಡಬೇಕಿದ್ದು, ಅದರ ಬಗ್ಗೆಯೂ ನಾಳೆ ನಡೆಯುವ ಸಭೆಯಲ್ಲಿ ತೀರ್ಮಾನವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.