ಫ್ರೆಂಡ್ಸ್ ಆಗೋಣ ಎಂದ ಕುಮಾರಸ್ವಾಮಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ

ಮಂಗಳವಾರ, 6 ಮಾರ್ಚ್ 2018 (09:13 IST)
ಬೆಂಗಳೂರು: ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್  ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ನೀಡಿ ಎಂದು ಸಹಾಯ ಕೇಳಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಶಾಕ್ ಕೊಟ್ಟಿದ್ದಾರೆ.

ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಮಾಡಲ್ಲ ಎಂದು ಸಿಎಂ ಖಡಕ್ ಆಗಿ ಹೇಳಿದ್ದಾರೆ. ಒಂದು ವೇಳೆ ಈಗ ಜೆಡಿಎಸ್ ಗೆ ಸಹಾಯ ಮಾಡಿದರೆ ಮುಂದಿನ ದಿನಗಳಲ್ಲಿ ನಿಮ್ಮ ಸಹಾಯಕ್ಕೆಬರುವುದಾಗಿ ಕುಮಾರಸ್ವಾಮಿ ಆಹ್ವಾನ ನೀಡಿದ್ದರು. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬಂದರೆ ಕಾಂಗ್ರೆಸ್ ಜತೆ ಮೈತ್ರಿಗೆ ಸಿದ್ಧ ಎಂಬರ್ಥದಲ್ಲಿ ಮಾತನಾಡಿದ್ದರು.

ಆದರೆ ಕುಮಾರಸ್ವಾಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿ ಮೂರನೇ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ