‘ಕೆಜೆಪಿಯಲ್ಲಿದ್ದಾಗ ಹಾರ ಹಾಕಿಸಿಕೊಂಡಿದ್ದ ಬಿಎಸ್ ವೈ ಬಿಜೆಪಿ ಬಂದಾಗ ಕೂಗಾಡೋದು ಯಾಕೆ?’
‘ಕೆಜೆಪಿಯಲ್ಲಿದ್ದಾಗ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಟಿಪ್ಪು ಜಯಂತಿಗೆ ಖಡ್ಗ ಹಿಡಿದು, ಹಾರ ಹಾಕಿಸಿಕೊಂಡಿದ್ದರು. ಇದೀಗ ಬಿಜೆಪಿಗೆ ಬಂದಾಗ ಯಾಕೆ ವಿರೋಧಿಸುತ್ತಿದ್ದಾರೆ?’ ಎಂದು ಸಿಎಂ ಪ್ರಶ್ನಿಸಿದ್ದಾರೆ. ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಹಾಕಬೇಡಿ ಎಂದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಆಮಂತ್ರಿಸುವುದು ನಮ್ಮ ಕರ್ತವ್ಯ. ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದಿದ್ದಾರೆ.