ಈಗೇನಾದ್ರೂ ಯಡಿಯೂರಪ್ಪಗೆ ನೋಟು ಪ್ರಿಂಟ್ ಮೆಷಿನ್ ಬಂತಾ? ಸಿಎಂ ಸಿದ್ದು ಗುದ್ದು

ಶನಿವಾರ, 5 ಮೇ 2018 (07:59 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ರೈತರ ಸಾಲಮನ್ನಾ ಕುರಿತು ಪ್ರಸ್ತಾಪಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ನಾವು ರೈತರ ಸಾಲ ಮನ್ನಾ ಮಾಡಿ ಎಂದಾಗ ನಾವೇನು ನೋಟು ಪ್ರಿಂಟ್ ಮೆಷಿನ್ ಇಟ್ಟುಕೊಂಡಿದ್ದೀವೇನ್ರೀ ಎಂದು ಯಡಿಯೂರಪ್ಪನವರು ಪ್ರಶ್ನಿಸಿದ್ದರು. ಹಾಗಿದ್ದರೆ ಈಗ ನೋಟು ಪ್ರಿಂಟ್ ಮೆಷಿನ್ ಬಂತಾ ಯಡಿಯೂರಪ್ಪನವರೇ?’ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲ, ಪ್ರಣಾಳಿಕೆಯಲ್ಲಿ ಘೋಷಿಸಿದ ಅನ್ನಪೂರ್ಣ ಕ್ಯಾಂಟೀನ್ ಯೋಜನೆ ನಮ್ಮ ಇಂದಿರಾ ಕ್ಯಾಂಟೀನ್ ಯೋಜನೆಯ ನಕಲು ಎಂದು ಸಿಎಂ ಟೀಕಿಸಿದ್ದಾರೆ. ಅಷ್ಟೇ ಅಲ್ಲ, 2008 ರಲ್ಲಿ ಬಿಡುಗಡೆ ಮಾಡಿದ್ದ ಯೋಜನೆಯನ್ನೇ ಪೂರೈಸಿಲ್ಲ. ಈಗ ಬಿಡುಗಡೆ ಮಾಡಿರುವ ಯೋಜನೆಗೂ ಅದೇ ಗತಿ ಎಂದು ಸಿಎಂ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ