‘ನಮಗೆ ಲೆಕ್ಚರ್ ಕೊಡುತ್ತಾ ಕೂರುವುದನ್ನು ಸ್ವಲ್ಪ ಕಡಿಮೆ ಮಾಡಿ’

ಗುರುವಾರ, 15 ಮಾರ್ಚ್ 2018 (09:45 IST)
ಬೆಂಗಳೂರು: ಉತ್ತರ ಪ್ರದೇಶದಲ್ಲಿ ತಮ್ಮದೇ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋತಿರುವುದಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
 

ಮೊದಲು ನಮಗೆ ಲೆಕ್ಚರ್ ಕೊಡುವುದನ್ನು ನಿಲ್ಲಿಸಿ. ನಿಮ್ಮ ಕ್ಷೇತ್ರದಲ್ಲಿ ನಿಮ್ಮ ಪಕ್ಷ ಉಳಿಸಿಕೊಳ್ಳುವುದು ಹೇಗೆ ಎಂದು ನೋಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ, ಸಿಎಂ ಯೋಗಿಗೆ ಲೇವಡಿ ಮಾಡಿದ್ದಾರೆ.

ಇತ್ತೀಚೆಗೆ ಕರ್ನಾಟಕಕ್ಕೆ ಬಿಜೆಪಿ ರ್ಯಾಲಿಗೆ ಬಂದಿದ್ದ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಉಪಚುನಾವಣೆ ಸೋತ ಬಳಿಕ ಸಿಎಂ ಸಿದ್ದರಾಮಯ್ಯ ಯೋಗಿಗೆ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ