ಬಿಬಿಎಂಪಿ ಮೈತ್ರಿ: ಕಾಂಗ್ರೆಸ್ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಶುಕ್ರವಾರ, 28 ಆಗಸ್ಟ್ 2015 (21:31 IST)
ಬಿಬಿಎಂಪಿ ಅಧಿಕಾರ ಹಿಡಿಯುವ ಕಸರತ್ತು ರಾಜ್ಯ ರಾಜಕೀಯದಲ್ಲಿ ಕೋಲಾಹಲವೆಬ್ಬಿಸಿದೆ. ಬಿಬಿಎಂಪಿ ಅಧಿಕಾರದ ಗದ್ದುಗೆ ಹಿಡಿಯುವ ತಂತ್ರ ಕೊನೆಯ ಹಂತದಲ್ಲಿ ಕೈ ತಪ್ಪಿ ಹೋಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶ ರವಾನಿಸಿದ್ದಾರೆ.
 
ಇಂದು ಅವರನ್ನು ಭೇಟಿಯಾದ ಸಚಿವ ಮಹಾದೇವ್ ಪ್ರಸಾದ್ ಮತ್ತು ಸಿ.ಎಂ.ಇಬ್ರಾಹಿಂ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. 
 
ನಾಳೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಕಾರ್ಪೋರೇಟರ್‌ಗಳ ಸಭೆ ನಡೆಯಲಿದ್ದು, ಸಭೆಗೆ ಶಾಸಕರು, ಸಚಿವರು ಮತ್ತು ಸಂಸದರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಬಿಬಿಎಂಪಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿವೆ ಎನ್ನುವ ಆರೋಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.
 

ವೆಬ್ದುನಿಯಾವನ್ನು ಓದಿ