ಸಿಎಂ ಸಿದ್ದರಾಮಯ್ಯ ಪಕ್ಷಕ್ಕಿಂತ ದೊಡ್ಡವರಂತೆ ವರ್ತಿಸುತ್ತಿದ್ದಾರೆ: ವಿಶ್ವನಾಥ್ ಗುಡುಗು

ಮಂಗಳವಾರ, 21 ಜೂನ್ 2016 (11:28 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷಕ್ಕಿಂತ ದೊಡ್ಡವರಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಗುಡುಗಿದ್ದಾರೆ.
 
ಸಿದ್ದರಾಮಯ್ಯ ಹಿಂದೆ ನಡೆದು ಬಂದ ದಾರಿ ಮರೆತಿದ್ದಾರೆ. ಹಿಂದೆ ದೇವೇಗೌಡರು ಜೆಡಿಎಸ್ ಪಕ್ಷದಿಂದ ಹೊರಹಾಕಿದಾಗ ಕಾಂಗ್ರೆಸ್ ಪಕ್ಷ ಅವಕಾಶ ನೀಡಿತ್ತು, ಮಲ್ಲಿಕಾರ್ಜುನ್ ಖರ್ಗೆಯವರಂತಹ ಹಿರಿಯರಿದ್ದಾಗಲು ಹೈಕಮಾಂಡ್ ವಿಪಕ್ಷ ನಾಯಕನ ಸ್ಥಾನ ನೀಡಿತ್ತು ಎನ್ನುವುದು ಮರೆಯಬಾರದು ಎಂದು ಕಿವಿಮಾತು ಹೇಳಿದ್ದಾರೆ.
 
ಒಂು ವೇಳೆ ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡಬೇಕು ಎಂದು ಬಯಸಿದಲ್ಲಿ ಖಂಡತವಾಗಿ ಬದಲಾವಣೆ ಮಾಡಬೇಕು. ಹೈಕಮಾಂಡ್ ಹಿಂದೆ ನಾವಿದ್ದೇವೆ ಎಂದು ತಿಳಿಸಿದ್ದಾರೆ.
 
ಸಿದ್ದರಾಮಯ್ಯ ರಾಜ್ಯದ ನಾಯಕರನ್ನು, ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ತಾವು ನಡೆದ ದಾರಿ ಹೆದ್ದಾರಿಯಂತೆ ವರ್ತಿಸುತ್ತಿದ್ದಾರೆ. ರಾಜ್ಯದಲ್ಲಿ ಸಿಎಂ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಮುಖ್ಯಮಂತ್ರಿಗಳು ರಾಜ್ಯದ ಕಾಂಗ್ರೆಸ್ ನಾಯಕರ ವಿಶ್ವಾಸವನ್ನು ಗಳಿಸುವಲ್ಲಿ ವಿಫಲವಾಗಿದ್ದಾರೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ