ಸುಪ್ರೀಂಕೋರ್ಟ್ ತೀರ್ಪು ಪಾಲಿಸಿದಲ್ಲಿ ಕಾವೇರಿ ಜಲಾಶಯಗಳು ಬರಿದಾಗಿ ಕುಡಿಯುವ ನೀರಿಗೂ ತೀವ್ರ ತೊಂದರೆ ಎದುರಿಸಬೇಕಾದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ರೀತಿ ಮುಂದಿನ ಹೆಜ್ಜೆಯಿಡಬೇಕು ಎನ್ನುವ ಬಗ್ಗೆ ಸಚಿವರೊಂದಿಗೆ ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ಅನ್ಯಾಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಉಗ್ರ ಪ್ರತಿಭಟನೆಗಿಳಿದಿವೆ. ಬೆಂಗಳೂರು, ಮೈಸೂರು, ಮಂಡ್ಯ, ಹುಬ್ಬಳ್ಳಿ ನಗರಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ.