637 ನೂತನ ಅತ್ಯಾಧುನಿಕ ಬಸ್‌ಗಳಿಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ

ಗುರುವಾರ, 18 ಆಗಸ್ಟ್ 2016 (15:52 IST)
ಸಾರಿಗೆ ಸಂಸ್ಥೆ ಹುಟ್ಟಿಕೊಂಡಿರುವುದು ಲಾಭಕ್ಕಾಗಿ ಅಲ್ಲ. ಹಾಗೆಂದು ನಷ್ಟ ಮಾಡಿಕೊಳ್ಳಬೇಕು ಎಂದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ವಿಧಾನಸೌಧದ ಮುಂಬಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ 637 ನೂತನ ಅತ್ಯಾಧುನಿಕ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದರು.
 
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿ ಸಂಸ್ಥೆ ದೇಶದಲ್ಲಿ ಅತ್ಯುತ್ತಮ ಸಾರಿಗೆ ವ್ಯವಸ್ಥೆ ಹೊಂದಿದೆ. ಸಾರಿಗೆ ವಲಯದಲ್ಲಿ ಉತ್ತಮ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಇದಕ್ಕೆಲ್ಲಾ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಪರಿಶ್ರಮ ಕಾರಣ ಎಂದು ಹೇಳಿದರು.
 
ಈ ಹಿಂದೆ ಸಾರಿಗೆ ನೌಕರರ ವೇತನವನ್ನು 10 ರಷ್ಟು ಯಾರು ನೀಡಿಲ್ಲ. ಆದರೆ, ಈ ಬಾರಿ ನೌಕರರ ವೇತನ ಪರಿಷ್ಕರಣೆಯಲ್ಲಿ 12.5 ರಷ್ಟು ಹೆಚ್ಚಿಸಲಾಗಿದೆ. ಸಾರಿಗೆ ನೌಕರರ ವೇತನವನ್ನು ಪ್ರತಿ 4 ವರ್ಷಗಳಿಗೊಮ್ಮೆ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದರು.
 
ಮೂರು ತಿಂಗಳ ಅವಧಿಯಲ್ಲಿ ಸಾರಿಗೆ ಇಲಾಖೆಯಲ್ಲಿ 26,600 ನೌಕರರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ 2990 ನೂತನ ಬಸ್‌ಗಳನ್ನು ಸಾರ್ವಜನಿಕರ ಸೇವೆಗೆ ಬರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ