ಭೀಮಾನಾಯ್ಕ್, ಚಿಕ್ಕರಾಯಪ್ಪ ಹಾಗೂ ಜಯಚಂದ್ರ ಬಂಧನದ ನಂತರ ಅವರು ಯಾರಿಗೆ ಹಣ ನೀಡಿದ್ದೇವೆ ಎಂದು ಬಾಯ್ಬಿಟ್ಟಿದ್ದಾರೆ. ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರ ಬಣ್ಣ ಬಯಲಾಗಲಿದೆ. ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಸಿಎಂ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೈಕಮಾಂಡ್ಗೆ ಹಣ ನೀಡಿ ತಮ್ಮ ಅಧಿಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯ ಏನಾಗಲಿದೆ ಎನ್ನುವುದನ್ನು ರಾಜ್ಯದ ಜನತೆಯೇ ತಿಳಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.