ನಾನು 50 ಕ್ಯಾಂಡಲ್ ಬಲ್ಬ್, ಅವರು 5 ಮೆಗಾ ವ್ಯಾಟ್ ಲೈನ್: ಸಿದ್ದುಗೆ ಸಿಎಂ ಇಬ್ರಾಹಿಂ ಟಾಂಗ್

ಶುಕ್ರವಾರ, 21 ಅಕ್ಟೋಬರ್ 2016 (15:38 IST)
ನಾನು 50 ಕ್ಯಾಂಡಲ್ ಬಲ್ಬ್, ಅವರು 5 ಮೆಗಾ ವ್ಯಾಟ್ ಲೈನ್. ಮಹಾನ್ ನಾಯಕರ ಕುರಿತು ನಾನೇನು ಹೇಳಲಿ. ಇತ್ತೀಚಿನ ರಾಜಕೀಯ ಬೆಳವಣಿಗೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನಾವು ಅಂದುಕೊಂಡ ಹಾಗೇ ಏನು ನಡೆದಿಲ್ಲ ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಬಹಿರಂಗವಾಗಿಯೇ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದ್ದೆ. ಆದರೆ, ನಿರೀಕ್ಷೆಯಂತೆ ಅವರು ಕೆಲಸ ನಿರ್ವಹಿಸದಿರುವುದು ನಮ್ಮ ಮನಸ್ಸಿಗೆ ನೋವುಂಟು ಮಾಡಿದೆ ಎಂದರು.
 
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಜೊತೆ ಬಾಂಧ್ಯವ್ಯ ಯಾವತ್ತು ಇದ್ದೆ ಇರುತ್ತೆ. ಅವರು ಕರ್ನಾಟಕದ ತಳಸೀದಳದಂತೆ. ತುಳಸೀದಳದ ಮಹತ್ವ ಎಲ್ಲರಿಗೂ ಗೊತ್ತಿದೆ ಎಂದು ಕೊಂಡಿದ್ದೇನೆ ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಹೇಳಿದರು.
 
ದಶಕಗಳಿಂದ ಸಿಎಂ ಸಿದ್ದರಾಮಯ್ಯನವರ ಚಡ್ಡಿದೋಸ್ತ್ ಆಗಿರುವ ಸಿಎಂ ಇಬ್ರಾಹಿಂ ಇದೀಗ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದು, ಇವರಿಬ್ಬರ ನಡುವಿನ ಸಂಬಂಧ ಹಳಸಿ ಹೋಗಿದೆಯಾ ಎನ್ನುವ ಅನುಮಾನ ಎಲ್ಲರಲ್ಲೂ ಕಾಡುತ್ತಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ