ಇಲ್ಲಿನ ಡಾ.ಗುಬ್ಬಿ ವೀರಣ್ಣ ಕ್ಷೇತ್ರದಲ್ಲಿ ನಡೆದ ಜಿಲ್ಲಾ ಕುರುಬರ ಸಂಘಧ ಸರ್ವ ಸದಸ್ಯರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೈ ಕಟ್ಟಿ ಕೂರಿಸುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಮತ್ತು ಎಚ್.ಎಂ ರೇವಣ್ಣ ಅವರಿಗೆ ಕಾಂಗ್ರೆಸ್ನಲ್ಲಿ ಉತ್ತಮ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಬಳಸಿಕೊಂಡು ಅವರು ಸಮಾಜಕ್ಕೆ ಒಳಿತಾಗುವು ಕೆಲಸ ಮಾಡಲಿ ಎಂದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕನಕ ಜಯಂತಿಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಮಾಡಿದೆ. ಹಿಂದುಳಿದ ವರ್ಗದ ಮಠಗಳಿಗೆ ಅವಶ್ಯಕ ಅನುದಾನ ಬಿಡುಗಡೆಗೂ ಶ್ರಮಿಸಿದೆ. ನಮಗೆ ಕುಟಂಬ, ಜಾತಿ, ಸಮಾಜ, ಧರ್ಮ, ರಾಷ್ಟ್ರ ಎಲ್ಲವೂ ಮುಖ್ಯ. ಕುಟುಂಬದಿಂದ ರಾಷ್ಟ್ರದವರೆಗೆ ಎಲ್ಲರ ಹಿತ ಕಾಯುವುದ ನಮ್ಮ ಕರ್ತವ್ಯವಾಗಬೇಕು ಎಂದರು.