ಡಿಜಿಪಿ ಓಂ ಪ್ರಕಾಶ್ ಅವರನ್ನು 5 ತಿಂಗಳ ಕಾಲ ಕಡ್ಡಾಯ ರಜೆಯ ಮೇಲೆ ಕಳುಹಿಸಿ ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡುವಂತೆ ಆಡಳಿತ ಇಲಾಖೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಆದರೆ, ಇಂದು ನಡೆದ ಗೃಹ ಇಲಾಖೆ ಹಾಗೂ ಆಡಳಿತ ಇಲಾಖೆಯ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಳಿತ ಇಲಾಖೆ ಸಲ್ಲಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ.
ಮೊದಲು ಗೃಹ ಸಚಿವರ ಸಲಹೆಗಾರ ಕೆಂಪಯ್ಯನವರನ್ನು ವಜಾಗೊಳಿಸಿ ಆವಾಗ ಪೊಲೀಸ್ ಇಲಾಖೆ ತಂತಾನೆ ಸುಧಾರಣೆಯಾಗುತ್ತದೆ. ಒಂದು ವೇಳೆ, ಡಿಜಿಪಿ ಓಂ ಪ್ರಕಾಶ್ ಅವರನ್ನು ವರ್ಗಾವಣೆಗೊಳಿಸುವುದರಿಂದ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಐಪಿಎಸ್ ಅಧಿಕಾರಿಗಳು ಸರಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದರು.