ಸಂಪುಟ ಪುನಾರಚನೆ: ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗದ ಸಿಎಂ ಸಿದ್ದರಾಮಯ್ಯ

ಭಾನುವಾರ, 19 ಜೂನ್ 2016 (11:40 IST)
ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಶಾಸಕರ ಬೆಂಬಲಿಗರು ಮತ್ತು ಇತರ ಸಚಿವ ಸ್ಥಾನ ಆಕಾಂಕ್ಷಿಗಳು ನಿರಂತರವಾಗಿ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ಯಾರನ್ನು ಭೇಟಯಾಗದಿರಲು ನಿರ್ಧರಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯರ ಅಧಿಕೃತ ನಿವಾಸವಾದ ಕಾವೇರಿಗೆ ಸಚಿವ ಆಕಾಂಕ್ಷಿಗಳ ದಂಡು ಹರಿದು ಬರುತ್ತಿದ್ದು, ಹಿರಿಯ ಕಾಂಗ್ರೆಸ್ ನಾಯಕರುಗಳು ಕೂಡಾ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
 
ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೈ ಬಿಟ್ಟ ಸಚಿವರ ಬೆಂಬಲಿಗರು ಆಯಾ ಕ್ಷೇತ್ರಗಳಲ್ಲಿ ರಸ್ತೆ ತಡೆ ಸೇರಿದಂತೆ ಭಾರಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಇದರಿಂದ ಜನಜೀವನ, ಸಂಚಾರ ಅಸ್ತವ್ಯಸ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಶತಾಯ ಗತಾಯ ಸಂಪುಟಕ್ಕೆ ಸೇರಬೇಕು ಎನ್ನುವ ಗುರಿಯೊಂದಿಗೆ ಶಾಸಕರು ತಮ್ಮ ಬೆಂಬಲಿಗರನ್ನು ಛೂ ಬಿಟ್ಟು ಪ್ರತಿಭಟನೆಯಲ್ಲಿ ತೊಡಗಿಸಿದ್ದಾರೆ. ಆದರೆ, ಸಚಿವರ ಆಯ್ಕೆ ಅಂತಿಮವಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.    

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ