ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮಂತ್ರಿ ಪರಿಷತ್ ಸಭೆಯಲ್ಲಿ ಹಿರಿಯ ಸಚಿವರಾದ ರಾಮಲಿಂಗಾರೆಡ್ಡಿ ಕಾಗೋಡು ತಿಮ್ಮಪ್ಪ, ಎಂ.ಬಿ.ಪಾಟೀಲ್, ಟಿ.ಬಿ.ಜಯಚಂದ್ರ ಸೇರಿದಂತೆ ಇನ್ನಿತರ ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಕರೆದಿದ್ದ ಸಭೆಯಲ್ಲಿ ಮಾತನಾಡಿದ ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್, ಕಾವೇರಿ ಕಣಿವೆಯಲ್ಲಿನ ಜಲಾಶಯಗಳ ಬಗ್ಗೆ ವಾಸ್ತವ ಅಂಶಗಳನ್ನು ಸುಪ್ರೀಂಕೋರ್ಟ್ಗೆ ರಾಜ್ಯದ ಪರ ವಕೀಲರಿಂದ ಮನವರಿಕೆ ಮಾಡಿಕೊಡಲಾಗಿತ್ತು. ಆದಾಗ್ಯೂ ಆದೇಶ ಮಾರ್ಪಾಡು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತು ಎಂದು ತಿಳಿಸಿದ್ದಾರೆ.