ರೈತರು ಸಂಕಷ್ಟದಲ್ಲಿದ್ದಾರೆ ಸಾಲ ಮನ್ನಾ ಮಾಡಿ: ಪ್ರಧಾನಿ ಮೋದಿಗೆ ಸಿಎಂ ಮನವಿ

ಗುರುವಾರ, 2 ಮಾರ್ಚ್ 2017 (13:21 IST)
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. 
 
ರಾಜ್ಯದ 160 ತಾಲೂಕುಗಳು ಬರಪೀಡಿತವಾಗಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸಾಲ ಮರುಪಾವತಿ ಮಾಡುವ ಸ್ಥಿತಿಯಲ್ಲಿಲ್ಲ ಎಂದು ತಿಳಿಸಿದ್ದಾರೆ.
 
ಒಂದು ವೇಳೆ, ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಮಾಡಿದಲ್ಲಿ ಉಳಿದ ಅರ್ಧ ಸಾಲವನ್ನು ರಾಜ್ಯ ಸರಕಾರ ಮನ್ನಾ ಮಾಡಲಿದೆ ಎಂದು ವಿವರಣೆ ನೀಡಿದ್ದಾರೆ.
  
ಕೇಂದ್ರ ಸರಕಾರ ಪ್ರಸ್ತುತ ಹೈ-ಕ ಭಾಗಕ್ಕೆ 1000 ಕೋಟಿ ರೂಪಾಯಿ ಅನುದಾನ ನೀಡುತ್ತಿದ್ದು, ಮುಂದಿನ ವರ್ಷದ ಬಜೆಟ್‌ನಲ್ಲಿ ಅನುದಾನವನ್ನು 1500 ಕೋಟಿ ರೂಪಾಯಿಗೆ ಹೆಚ್ಚಿಸಬೇಕು ಎಂದು ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ