ಆರೋಪ ಬಂದ ಮಾತ್ರಕ್ಕೆ ರಾಜೀನಾಮೆ ನೀಡಿದ್ರೆ ವಿಧಾನಸೌಧ ಖಾಲಿಯಾಗುತ್ತೆ: ದೇಶಪಾಂಡೆ
ಕಲಬುರ್ಗಿ: ಸಚಿವ ಜಾರ್ಜ್ ಮೇಲೆ ಸಿಬಿಐ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸಚಿವ ದೇಶಪಾಂಡೆ ಹೇಳಿದ್ದಾರೆ.
ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಸಾಕಷ್ಟು ವರ್ಷದ ಹಿಂದೆಯೇ ಸಿಎಂ ಸ್ಥಾನ ಸಿಗಬೇಕಿತ್ತು. ಅವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಜತೆಗೆ ಸಾಕಷ್ಟು ಅನುಭವ ಹೊಂದಿದ್ದಾರೆ. ಸಿಎಂ ಆಗಲು ಅವಕಾಶ ಮುಖ್ಯವಲ್ಲ, ಅದೃಷ್ಟವೂ ಬೇಕು. ಸಿದ್ದರಾಮಯ್ಯಗೆ ಅದೃಷ್ಟ ಇತ್ತು ಸಿಎಂ ಆದರು. ಚುನಾವಣೆ ಮುಗಿದ ನಂತರ ಯಾರು ಸಿಎಂ ಆಗ್ತಾರೆ ಎನ್ನುವುದರ ಬಗ್ಗೆ ಚರ್ಚೆ ನಡೆಯಲಿದೆ ಎಂದರು.