ನಾಳೆ IFFCO ನ್ಯಾನೊ ಸ್ಥಾವರಕ್ಕೆ ಅಡಿಗಲ್ಲು ಹಾಕಲಿರುವ CM

ಬುಧವಾರ, 13 ಜುಲೈ 2022 (20:31 IST)
ನಾಳೆ ಜುಲೈ 14-2022 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ನಾಗನಾಯಕನಹಳ್ಳಿಯ ಏರೋಟೆಕ್ ಪಾರ್ಕ್ ಗೆ ಭೇಟಿ ನೀಡಲಿದ್ದಾರೆ. KIADB ಮೊದಲ ಹಂತದ ಜಾಗದಲ್ಲಿ IFFCO ನ್ಯಾನೊ ಯೂರಿಯಾ ಸ್ಥಾವರಕ್ಕೆ ಅಡಿಗಲ್ಲು ಹಾಕಲಿದ್ದಾರೆ. ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ಸ್ ಲಿಮಿಟೆಡ್ ನ ಈ ಸ್ಥಾವರದ ಮೂಲಕ ಗೊಬ್ಬರ ಉತ್ಪಾದನೆಗೆ ಹೆಚ್ಚು ಒತ್ತು ನೀಡಲಾಯಿತು. ಇದರ ಕಾಮಗಾರಿ ಚಾಲನೆಗೆ ಹಾಗೂ KIAFB ಪ್ರದೇಶದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ಸಹ ನಡೆಸಲಿದೆ. CM.ಆಗಮನ ಹಿನ್ನಲೆ ಬೆಂಗಳೂರು ಗ್ರಾಮಾಂತರ ಎಸ್.ಪಿ.ವಂಶೀಕೃಷ್ಣ ಖುದ್ದು ಭೇಟಿ ನೀಡಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ