ಹಿಂದು- ಮುಸ್ಲಿಮರ ಸಂಬಂಧ ಹಾಳುಮಾಡಲು ಸಿಎಂ ಷಡ್ಯಂತ್ರ- ಬಿಎಸ್ ವೈ

ಸೋಮವಾರ, 8 ಜನವರಿ 2018 (23:17 IST)

ದೀಪಕ್ ರಾವ್, ಬಶೀರ್ ಹತ್ಯೆಗಳನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದುಮುಸ್ಲಿಮರ ಸಂಬಂಧವನ್ನು ಹಾಳು ಮಾಡಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೀಪಕ್ ರಾವ್, ಬಶೀರ್ ಕೊಲೆಗಳು ನಡೆದರೂ, ಕೊಲೆಗಳನ್ನು ತಡೆಗಟ್ಟುವ ಸಂಬಂಧ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾರೆಡ್ಡಿ ಉನ್ನತ ಅಧಿಕಾರಿಗಳ ಸಭೆ ನಡೆಸಿಲ್ಲ ಎಂದು ದೂರಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಸರ್ಕಾರ ರಾಜ್ಯದಲ್ಲಿದ್ದು, ಕೊಲೆಗಳನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಅತ್ಯಂತ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ