ಮಲ್ಲೇಶ್ವರಂ ಕಾಲೇಜಿಗೆ ಸಿಎಂ ಭೇಟಿ; ಖುದ್ದು ಪರಿಶೀಲನೆ

ಸೋಮವಾರ, 23 ಆಗಸ್ಟ್ 2021 (10:53 IST)
ಬೆಂಗಳೂರು: ಕೋವಿಡ್ 3ನೇ ಅಲೆ ಭೀತಿ ನಡುವೆಯೇ ಇಂದಿನಿಂದ 9-12ನೇ ತರಗತಿವರೆಗೆ ಶಾಲಾ-ಕಾಲೇಜುಗಳು ಆರಂಭಗೊಂಡಿದ್ದು, ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ನ 18ನೇ ಕ್ರಾಸ್ ನಲ್ಲಿರುವ ಕಾಲೇಜಿಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ಕಾಲೇಜು ಆವರಣದಲ್ಲಿ ಸಂಪಿಗೆ ಗಿಡನೆಟ್ಟು ನೀರೆರೆದರು. ಈ ವೇಳೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಮೊದಲಾದವರು ಸಿಎಂಗೆ ಸಾಥ್ ನೀಡಿದರು.
ಕೊರೊನಾ ಮುಂಜಾಗೃತಾ ಕ್ರಮವಾಗಿ ಕಾಲೇಜಿನಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು, ಥರ್ಮಲ್ ಸ್ಕ್ರೀನಿಂಗ್, ಕೊಠಡಿಗಳಲ್ಲಿ ವಿದ್ಯಾರ್ಥಿಗಳ ಅಂತರ ಸೇರಿದಂತೆ ಖುದ್ದು ಪರಿಶೀಲನೆ ನಡೆಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ