ಕೊರೊನಾಗೆ ಮೊದಲ ಬಲಿ; ತುರ್ತು ಸಭೆ ಕರೆದ ಸಿಎಂ

ಶುಕ್ರವಾರ, 13 ಮಾರ್ಚ್ 2020 (10:37 IST)
ಬೆಂಗಳೂರು : ಕಲಬುರಗಿಯ ವೃದ್ಧ ಕೊರೊನಾ ಸೋಂಕಿಗೆ ಬಲಿಯಾದ ಹಿನ್ನಲೆಯಲ್ಲಿ  ಸಿಎಂ ಯಡಿಯೂರಪ್ಪ  ಅವರು ಇಂದು ತುರ್ತು ಸಭೆ ಕರೆದಿದ್ದಾರೆ.


ಇಂದು ವಿಧಾನ ಸೌಧದಲ್ಲಿ  ಮಧ್ಯಾಹ್ನ 1 ಗಂಟೆಗೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಇದರಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಆರೋಗ್ಯ ಸಚಿವ ಶ್ರೀರಾಮುಲು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಸಭೆಯಲ್ಲಿ  ಮುಂದಿನ ಮಾರ್ಗ ಸೂಚನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮಾಧ್ಯಮದವರಿಗೆ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ