ಇಂದಿನ ಕಲಾಪದಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರಿಸಲಿರುವ ಸಿಎಂ

ಶುಕ್ರವಾರ, 19 ಡಿಸೆಂಬರ್ 2014 (11:12 IST)
ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪವು ಒಂಭತ್ತನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 9.30ಕ್ಕೆ ಆರಂಭವಾಗಲಿದೆ. ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸದನದಲ್ಲಿ ವಿರೋಧ ಪಕ್ಷದ ಸದಸ್ಯರು ಕೇಳಿದ್ದ ಎಲ್ಲಾ ಪ್ರಶ್ನೆಗಳಿಗೆ ಇಂದಿನ ಕಲಾಪದಲ್ಲಿ ಉತ್ತರಿಸಲಿದ್ದಾರೆ ಎನ್ನಲಾಗಿದೆ. 
 
ವಿರೋಧ ಪಕ್ಷಗಳ ಸದಸ್ಯರು ಹೆಚ್ಚಾಗಿ ಉತ್ತರ ಕರ್ನಾಟಕ ಭಾಗದಲ್ಲಿರುವ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದರು. ಹಾಗಾಗಿ ಕಬ್ಬು ಬೆಳೆಗಾರರ ಸಮಸ್ಯೆ, ರಾಗಿ, ಜೋಳ ಸೇರಿದಂತೆ ಇತರೆ ಬೆಳೆಗಳ ಬೆಂಬಲ ಬೆಲೆ ಹಾಗೂ ನೀರು ಪೂರೈಕೆ ಯೋಜನೆಗಳು ಸೇರಿದಂತೆ ಉತ್ತರ ಕರ್ನಾಟಕ ಜನರಿಗೆ ಸಂಬಂಧಿಸಿದ ಇತರೆ ಸಮಸ್ಯೆಗಳ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಹಲವು ಪ್ರಶ್ನೆಗಳನ್ನು ಕೇಳಿದ್ದರು. ಈ ಸಂಬಂಧ ಸಿಎಂ ಸಿದ್ದರಾಮಯ್ಯನವರು ಇಂದಿನ ಕಲಾಪದಲ್ಲಿ ಉತ್ತರಿಸಲಿದ್ದಾರೆ ಎಂದು ಮೂಲಗಶು ತಿಳಿಸಿವೆ. 
 
ಇನ್ನು ಮುಖ್ಯಮಂತ್ರಿಗಳ ಉತ್ತರ ಪಡೆದ ಬಳಿಕ ರಾಜ್ಯದ ಜನರ ಹಿತಾಸಕ್ತಿಗಾಗಿ ಜಾರಿಗೊಳಿಸಿರುವ ಹಲವು ನೀರಾವರಿ ಯೋಜನೆ ಹಾಗೂ ನೀರಿನ ಸಮಸ್ಯೆ ನಿವಾರಣೆ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿದು ಬಂದಿದೆ.  

ವೆಬ್ದುನಿಯಾವನ್ನು ಓದಿ