2025 ರಲ್ಲಿ ಸಿಎಂ ಬದಲಾವಣೆ ಪಕ್ಕಾ: ಕರ್ನಾಟಕಕ್ಕೆ ಹೊಸ ಸಿಎಂ ಯಾರಾಗಬೇಕು
ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರದ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ತೆರೆಮರೆಯಲ್ಲಿ ಪ್ರಯತ್ನಗಳು ನಡೆಯುತ್ತಲೇ ಇವೆ. ಸಿದ್ದರಾಮಯ್ಯ ಈ ವರ್ಷ ಸಿಎಂ ಕುರ್ಚಿ ಕಳೆದುಕೊಳ್ಳುವುದು ಪಕ್ಕಾ ಎನ್ನುತ್ತಿವೆ ವರದಿಗಳು. ಹಾಗಿದ್ದರೆ ಅವರ ಸ್ಥಾನವನ್ನು ತುಂಬುವವರು ಯಾರು ಎಂಬ ಪ್ರಶ್ನೆ ಎದುರಾಗಿದೆ.
ಈ ಮೊದಲು ಆಗಿದ್ದರೆ ಡಿಕೆ ಶಿವಕುಮಾರ್ ಎಂದು ಪಕ್ಕನೇ ಹೇಳಬಹುದಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಕಾಂಗ್ರೆಸ್ ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿಯೇ ಇದೆ. ಡಿಕೆ ಶಿವಕುಮಾರ್ ರಿಂದ ಹಿಡಿದು ಸತೀಶ್ ಜಾರಕಿಹೊಳಿ, ಜಿ ಪರಮೇಶ್ವರ್, ಎಂಬಿ ಪಾಟೀಲ್ ಸೇರಿದಂತೆ ಎಲ್ಲರೂ ಆಕಾಂಕ್ಷಿಗಳೇ.
ಈ ನಡುವೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವೂ ಪ್ರಸ್ತಾಪವಾಗಿದೆ. ಕೆಪಿಸಿಸಿ ಸ್ಥಾನದಿಂಧ ಡಿಕೆ ಶಿವಕುಮಾರ್ ಅವರನ್ನು ಕಿತ್ತು ಹಾಕಿದರೆ ಅವರು ಸಿಎಂ ಸ್ಥಾನಕ್ಕೆ ಬೇಡಿಕೆಯಿಡಬಹುದು. ಆದರೆ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾದರೆ ತಮ್ಮ ಆಪ್ತ ವಲಯದಲ್ಲಿರುವ ಸತೀಶ್ ಜಾರಕಿಹೊಳಿಗೆ ಪಟ್ಟ ಕೊಡಬೇಕೆಂದು ಸಿದ್ದು ಆಗ್ರಹಿಸಿದರೂ ಅಚ್ಚರಿಯಿಲ್ಲ. ಹೀಗಾಗಿ ಸತೀಶ್ ಜಾರಕಿಹೊಳಿ ಅಥವಾ ಡಿಕೆ ಶಿವಕುಮಾರ್ ಇಬ್ಬರಲ್ಲಿ ಒಬ್ಬರು ಸಿಎಂ ಆಗುವುದು ಪಕ್ಕಾ ಎನ್ನಲಾಗುತ್ತಿದೆ.