ಡಿಸಿಎಂ ಲಕ್ಷ್ಮಣ್ ಸವದಿ ಮೇಲೆ ಫುಲ್ ಗರಂ ಆದ ಸಿಎಂ ಯಡಿಯೂರಪ್ಪ. ಕಾರಣವೇನು ಗೊತ್ತಾ?

ಬುಧವಾರ, 16 ಅಕ್ಟೋಬರ್ 2019 (10:48 IST)
ಬೆಂಗಳೂರು : ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಲು ಸಿದ್ದರಾದ ಸಿಎಂ ಯಡಿಯೂರಪ್ಪ ಅವರ  ಹೆಲಿಕಾಪ್ಟರ್ ಪ್ರಯಾಣ ರದ್ದಾಗಿದ್ದಕ್ಕೆ ಸಿಎಂ ಪುಲ್ ಗರಂ ಆಗಿದ್ದಾರೆ.




ಇಂದಿನಿಂದ ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಇಳಿಯಲು ಹೊರಟ ಸಿಎಂ ಯಡಿಯೂರಪ್ಪ ಇಂದು ಮಹಾರಾಷ್ಟ್ರದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರಕ್ಕೆ ತೆರಳಬೇಕಿತ್ತು. ಅದಕ್ಕಾಗಿ  ಬೆಳಿಗ್ಗೆ 8.50ಕ್ಕೆ ಅವರ ಹೆಲಿಕಾಪ್ಟರ್ ಪ್ರಯಾಣ ನಿಗದಿಯಾಗಿತ್ತು. ಆದರೆ ಹೆಲಿಕಾಪ್ಟರ್ ಪ್ರಯಾಣ ರದ್ದಾಗಿದ್ದಕ್ಕೆ ಸಿಎಂ ಯಡಿಯೂರಪ್ಪ, ಡಿಸಿಎಂ ಲಕ್ಷ್ಮಣ್ ಸವದಿ ಮೇಲೆ ಪುಲ್ ಗರಂ ಆಗಿದ್ದಾರೆ ಎನ್ನಲಾಗಿದೆ.


ಮಹಾರಾಷ್ಟ್ರ ಚುನಾವಣಾ ಉಸ್ತುವಾರಿಯನ್ನು ಡಿಸಿಎಂ ಲಕ್ಷ್ಮಣ್ ಸವದಿ ವಹಿಸಿಕೊಂಡ ಹಿನ್ನಲೆಯಲ್ಲಿ ಮತ್ತೊಂದು ಹೆಲಿಕಾಪ್ಟರ್ ವ್ಯವಸ್ಥೆ ಮಾಡದಿದದ್ದಕ್ಕೆ ಡಿಸಿಎಂ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ