ಸುಪ್ರೀಂ ತೀರ್ಪಿನಿಂದ ಸಂತಸಗೊಂಡ ಸಿಎಂ ಯಡಿಯೂರಪ್ಪ

ಬುಧವಾರ, 13 ನವೆಂಬರ್ 2019 (12:14 IST)
ಬೆಂಗಳೂರು: ಶಾಸಕರ ಅನರ್ಹತೆ ಪ್ರಕರಣದ ಬಗ್ಗೆ ಸುಪ್ರೀಂ ತೀರ್ಪು ಪ್ರಕಟವಾದ  ಹಿನ್ನಲೆ ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಸಂತಸದಿಂದ ಹೇಳಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ  ಸಿಎಂ, ಸುಪ್ರೀಂ ತೀರ್ಪಿಗೆ ಇಡೀ ದೇಶವೇ ಕಾಯುತ್ತಿತ್ತು. ಕುತಂತ್ರದಿಂದ ಅವರನ್ನು ಅನರ್ಹಗೊಳಿಸಲಾಗಿತ್ತು. ಆದ್ರೆ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ನಾಳೆಯಿಂದಲ್ಲೇ ಉಪಚುನಾವಣೆ ಗೆಲುವಿಗೆ ಯತ್ನಿಸುತ್ತೇವೆ. ಉಪಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ