ಸರಕಾರಿ ಅಧಿಕಾರಿಗಳಿಗೆ ಛಾಟಿ ಬೀಸಿದ ಸಿಎಂ ಯಡಿಯೂರಪ್ಪ

ಶುಕ್ರವಾರ, 13 ಡಿಸೆಂಬರ್ 2019 (14:35 IST)
ರಾಜ್ಯದ ಆಡಳಿತ ಯಂತ್ರವನ್ನು ವೇಗದಲ್ಲಿ ನಡೆಸಲು ಮುಂದಾಗಿರೋ ಸಿಎಂ, ಸರಕಾರಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇನ್ಮುಂದೆ ಸರಕಾರಿ ಕೆಲಸಗಳಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಅಂಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳೋದಾಗಿ ಎಚ್ಚರಿಸಿದ್ದಾರೆ.
ಜನರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸೋ ಕೆಲಸ ಆಗಬೇಕು. ಸರಕಾರಿ ವ್ಯವಸ್ಥೆಯಲ್ಲಿ ಸಂಪೂರ್ಣ ಸುಧಾರಣೆ ತರಬೇಕು ಎಂದಿದ್ದಾರೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೆಲಸಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಮಾಡಿಕೊಡದ ಕುರಿತು ದೂರುಗಳು ಕೇಳಿಬರುತ್ತಿವೆ ಎಂದು ಸಿಎಂ ಹೇಳಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ