ಕರಾವಳಿಗೆ ತೌಕ್ತೆ ಹೊಡೆತ: ಮಾಹಿತಿ ಪಡೆದ ಸಿಎಂ ಬಿಎಸ್ ವೈ

ಭಾನುವಾರ, 16 ಮೇ 2021 (10:23 IST)
ಬೆಂಗಳೂರು: ಮಂಗಳೂರು, ಕಾರವಾರ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗಕ್ಕೆ ಈಗ ತೌಕ್ತೆ ಚಂಡಮಾರುತದ ಪರಿಣಾಮ ತಗುಲಿದೆ.


ಚಂಡಮಾರುತ ಪ್ರಭಾವದಿಂದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಕಡಲ್ಕೊರೆತ ಹೆಚ್ಚುತ್ತಿದೆ. ಇದರಿಂದಾಗಿ ತೀರ ಪ್ರದೇಶದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಈ ನಡುವೆ ಸಿಎಂ ಯಡಿಯೂರಪ್ಪ ಕರಾವಳಿ ಪ್ರದೇಶದ ಶಾಸಕರು, ಅಧಿಕಾರಿಗಳು ಮತ್ತು ಜಿಲ್ಲಾದಿಕಾರಿಗಳಿಂದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಸ್ಥಳಕ್ಕೆ ಭೇಟಿ ನೀಡಿ ಆಗಿರುವ ಹಾನಿಗಳ ಬಗ್ಗೆ ಪರಿಶೀಲನೆ ನಡೆಸಿ ಎಂದು ಸೂಚನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ