ತಜ್ಞರ ಜೊತೆ ಇಂದು ಸಿಎಂ ಯಡಿಯೂರಪ್ಪ ಸಂವಾದ

ಶನಿವಾರ, 15 ಮೇ 2021 (11:36 IST)
ಬೆಂಗಳೂರು: ಲಾಕ್ ಡೌನ್ ಮುಂದುವರಿಕೆ, ಕೊರೋನಾ ಪರಿಸ್ಥಿತಿ ಕುರಿತು ಇಂದು ಸಿಎಂ ಯಡಿಯೂರಪ್ಪ ಆರೋಗ್ಯ ತಜ್ಞರ ಜೊತೆ ಸಂವಾದ ನಡೆಸಲಿದ್ದಾರೆ.


ಇಂದು ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ತಜ್ಞರು, ವೈದ್ಯರೊಂದಿಗೆ ಯಡಿಯೂರಪ್ಪ ಸಂವಾದ ನಡೆಸಲಿದ್ದಾರೆ. ಈಗಾಗಲೇ ತಜ್ಞರು ಲಾಕ್ ಡೌನ್ ಮುಂದುವರಿಸದಿದ್ದರೆ ಅಪಾಯ ಎನ್ನುತ್ತಿದ್ದಾರೆ.

ಹೀಗಾಗಿ ಈ ಸಭೆಯಲ್ಲಿ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಯಡಿಯೂರಪ್ಪ ಮುಂದಿನ ತೀರ್ಮಾನ ತೆಗೆದುಕೊಳ್ಳುವ ಸಾಧ‍್ಯತೆಯಿದೆ. ಒಂದು ವೇಳೆ ಲಾಕ್ ಡೌನ್ ಮಾಡುವುದಿದ್ದರೆ ಮೇ ಅಂತ್ಯದವರೆಗೂ ಮುಂದುವರಿಯುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ