ಇಂದು ಸಂಜೆ ಸಿಎಂ ಯಡಿಯೂರಪ್ಪ ತುರ್ತು ಪತ್ರಿಕಾಗೋಷ್ಠಿ

ಗುರುವಾರ, 13 ಮೇ 2021 (10:55 IST)
ಬೆಂಗಳೂರು: 18-44 ವರ್ಷದೊಳಗಿನ ವಯಸ್ಸಿನವರಿಗೆ ಕೊರೋನಾ ಲಸಿಕೆ ಸ್ಥಗಿತಗೊಳಿಸಿದ ಬೆನ್ನಲ್ಲೇ ಇಂದು ಸಂಜೆ ಸಿಎಂ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.


ಇಂದು ಸಂಜೆ 5 ಗಂಟೆಗೆ ಸಿಎಂ ಬಿಎಸ್ ವೈ  ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಸುದ್ದಿಗೋಷ್ಠಿ ನಡೆಸಲಿದ್ದು, ಮಹತ್ವದ ಮಾಹಿತಿ ನೀಡಲಿದ್ದಾರೆ.

ಈ ವೇಳೆ ಲಾಕ್ ಡೌನ್ ವಿಸ್ತರಣೆ ಅಥವಾ ಕಠಿಣ ನಿಯಮಗಳ ಕುರಿತು ಮಾತನಾಡಬಹುದು ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ, ಬಿಪಿಎಲ್ ಕಾರ್ಡ್ ದಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬಹುದು ಎಂಬ ಆಶಾಭಾವವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ