ಸಹಕಾರಿ ಸಂಸ್ಥೆಗಳ ಚುನಾವಣೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್

ಗುರುವಾರ, 15 ಜುಲೈ 2021 (14:34 IST)

ಸಹಕಾರಿ ಸಂಘ-ಸಂಸ್ಥೆಗಳು, ಬ್ಯಾಂಕ್ ಗಳ ಚುನಾವಣೆಗೆ ರಾಜ್ಯ ಸಚಿವ ಸಂಪುಟದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಹಕಾರಿ ಸಂಘ-ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನಿಸಲಾಗಿದ್ದು, ಈ ವಿಷಯವನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು.

ಸಹಕಾರ ಸಂಸ್ಥೆಗಳ ಚುನಾವಣೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಆದರೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಅವರು ಹೇಳಿದರು.

ವಿಧಾನಸೌಧ ಆವರಣದಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಇದರ ಖರ್ಚು ಮತ್ತು ವೆಚ್ಚವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಲನಕ್ಷೆ ರೂಪಿಸಲಿದೆ ಎಂದು ಅವರು ಹೇಳಿದರು.

ಕೊರೊನಾ ಸೋಂಕಿತರ ಚಿಕಿತ್ಸೆ ನೆರವಿಗಾಗಿ ಆಕ್ಸಿಜನ್ ತಯಾಕರು ಮತ್ತು ಪೂರೈಕೆಗೆದಾರರಿಗೆ ಮುಂದಿನ 3 ವರ್ಷಗಳ ಕಾಲ ಶೇ.25ರಷ್ಟು ಸುಂಕ ವಿನಾಯಿತಿ ನೀಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ