ಸಿಎಂ ಮೇಲೆ ಬಿಜೆಪಿಯಲ್ಲಿ ಅಸಮಾಧಾನ

ಶನಿವಾರ, 13 ನವೆಂಬರ್ 2021 (14:24 IST)
ಬಿಟ್ ಕಾಯಿನ್ ಪ್ರಕರಣ ಇನ್ನೊಂದು ಕಡೆ ವಲಸಿಗರಿಗೆ ವಿಶೇಷ ಮನ್ನಣೆ ಹಾಕುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆಗೆ ಮೂಲ ಬಿಜೆಪಿಗರಲ್ಲಿ ಅಸಮಾಧಾನ ಎದ್ದಿದೆ.ಹೀಗಾಗಿಯೇ ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ದಿನ ಕಳೆದಂತೆ ಬಿಜೆಪಿ ಮೇಲೆ ಮುಗಿ ಬೀಳುತ್ತಿದ್ದರೂ ಸಿಎಂ ಅವರನ್ನು ಬೆರಳೆಣಿಕೆಯಷ್ಟು ಮಂದಿ ಮಾತ್ರ ಸಮರ್ಥಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಕೆಲವರು ಮೌನಕ್ಕೆ ಶರಣಾಗಿದ್ದರೆ, ಇನ್ನು ಕೆಲವರು ಗೊತ್ತಿದ್ದರೂ ಗೊತ್ತಿಲ್ಲದಂತೆ ತೆರೆಮರೆಯಲ್ಲಿ ಆಟ ನೋಡುತ್ತಿದ್ದಾರೆ.
 
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅನಿರೀಕ್ಷಿತವಾಗಿ ಸಿಎಂ ಸ್ಥಾನ ಅಲಂಕರಿಸಿದ ಬೊಮ್ಮಾಯಿ ಅವರ ಮೇಲೆ ಬಿಜೆಪಿ ಅಪಾರವಾದ ನಿರೀಕ್ಷೆಯನ್ನು ಇಟ್ಟುಕೊಂಡಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ