ವಿದ್ಯಾರ್ಥಿನಿಯೊಬ್ಬಳನ್ನು ಆಕೆ ಓದುತ್ತಿದ್ದ ಕಾಲೇಜು ಹಾಸ್ಟೆಲ್ನಲ್ಲೇ ಗುಂಡಿಕ್ಕಿ ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಗೌತಮಿ(18) ಎಂಬಾಕೆಯೇ ದುರ್ಮರಣಕ್ಕೆ ಈಡಾದ ಯುವತಿಯಾಗಿದ್ದಾಳೆ. ಆಕೆಯ ಕಾಲೇಜಿನಲ್ಲಿ ಅಟೆಂಡರ್ ಆಗಿರುವ ಮಹೇಶ್ (40) ಎಂಬಾತನೇ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಗೌತಮಿಯ ಸ್ನೇಹಿತೆಯ ಮೇಲೂ ಹಲ್ಲೆ ನಡೆಸಿರುವ ಆರೋಪಿ ನಂತರ ಅಲ್ಲಿಂದ ಪರಾರಿಯಾಗಿದ್ದಾನೆ.