ಶಾಲೆ ತೆರೆಯುವ ವಿಚಾರವಾಗಿ ಇಂದು ಸಭೆ ಕರೆದ ಶಿಕ್ಷಣ ಇಲಾಖೆಯ ಆಯುಕ್ತರು

ಶುಕ್ರವಾರ, 6 ನವೆಂಬರ್ 2020 (10:45 IST)
ಬೆಂಗಳೂರು : ಶಾಲೆ ತೆರೆಯುವ ವಿಚಾರವಾಗಿ ಇಂದು ಶಿಕ್ಷಣ ಇಲಾಖೆಯ ಆಯುಕ್ತರು ಮಹತ್ವದ ಸಭೆ ಕರೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇಂದು ಶಿಕ್ಷಣ ಇಲಾಖೆಯ ಆಯುಕ್ತ ವಿ.ಅನ್ಬುಕುಮಾರ್ ನೇತೃತ್ವದಲ್ಲಿ ಮಧ್ಯಾಹ್ನ 12.30ಕ್ಕೆ ಈ  ಸಭೆ ನಡೆಯಲಿದೆ. ಶಾಲೆ ತೆರೆಯುವ ವಿಚಾರವಾಗಿ ಖಾಸಗಿ ಶಾಲಾ ಸಂಘಟನೆಗಳ ಜೊತೆ ಇಂದು ಶಿಕ್ಷಣ ಇಲಾಖೆಯ ಆಯುಕ್ತ ವಿ.ಅನ್ಬುಕುಮಾರ್ ಸಭೆ ನಡೆಸಲಿದ್ದಾರೆ. ಜಿಲ್ಲಾ ಉಪ ನಿರ್ದೇಶಕರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ