ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಂಧನಕ್ಕೆ ದೂರು?

ಬುಧವಾರ, 25 ಜನವರಿ 2023 (14:34 IST)
ಬೆಂಗಳೂರು : ಚುನಾವಣೆ ಗೆಲ್ಲೋಕೆ ಪ್ರತಿ ಮತಕ್ಕೆ 6 ಸಾವಿರ ಕೊಡಲು ನಾವು ಸಿದ್ದ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ವಿರುದ್ದ ಕಾಂಗ್ರೆಸ್ ದೂರು ನೀಡಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ತಂಡ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದೆ. ದೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಲಾಗಿದೆ. ಕೂಡಲೇ FRI ದಾಖಲು ಮಾಡಿ ಎಲ್ಲರನ್ನು ಬಂಧನ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. 

ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಬಿಜೆಪಿ ಹಾಳು ಮಾಡುತ್ತಿದೆ. ಜನರಿಗೆ ಆಮಿಷ ಒಡ್ಡುತ್ತಿದ್ದಾರೆ. 40% ಕಮಿಷನ್ನಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹ ಮಾಡಿ ಚುನಾವಣೆಗೆ ಹಂಚಲು ಸಿದ್ದತೆ ಮಾಡಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೋಳಿ ಪ್ರತಿ ಮತಕ್ಕೆ 6 ಸಾವಿರ ಕೊಡ್ತೀವಿ ಅಂತಾ ಹೇಳಿದ್ದಾರೆ. 5 ಕೋಟಿ ಮತದಾರರಿಗೆ 6 ಸಾವಿರದಂತೆ 30 ಸಾವಿರ ಕೋಟಿ ಹಣ ಹಂಚಲು ಬಿಜೆಪಿ ಮುಂದಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ