ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರ ವಿರುದ್ಧ ದೂರು ದಾಖಲು. ಕಾರಣವೇನು ಗೊತ್ತಾ?

ಶುಕ್ರವಾರ, 23 ಆಗಸ್ಟ್ 2019 (13:28 IST)
ರಾಯಚೂರು : ಶಾಂತಿ ಕದಡಿದ ಆರೋಪದ ಮೇಲೆ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರ ವಿರುದ್ಧ ದೂರು ದಾಖಲಾಗಿದೆ.




ರಾಯರ 348ನೇ ಆರಾಧನೆಯ ಮಹಾ ರಥೋತ್ಸವದ ವೇಳೆ ಮಠದ ಆವರಣದಲ್ಲಿ ಶ್ರೀಗಳು 100 ರೂ. ನೋಟುಗಳನ್ನು ತೂರಿದರು. ಇದರಿಂದ ನೂಕುನುಗ್ಗಲು ಉಂಟಾಗಿ ಜನ ತೊಂದರೆ ಅನುಭವಿಸಿದ್ದರು ಎಂದು ಮಠದ ವಸತಿ ಸಮುಚ್ಚಯವೊಂದರ ನಿರ್ವಹಣೆ ಗುತ್ತಿಗೆ ಪಡೆದಿರುವ ನಾರಾಯಣ ಶ್ರೀಗಳ ವಿರುದ್ಧ ದೂರು ದಾಖಲಿಸಿದ್ದಾರೆ.


ಈ ಬಗ್ಗೆ ಶ್ರೀಗಳ ವಿರುದ್ಧ ನಾರಾಯಣ ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅದರ ಜೊತೆಗೆ ನನ್ನ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ ಅದಕ್ಕೆ ಶ್ರೀಗಳೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ