ಶ್ರೀರಾಮಚಂದ್ರಾಪುರದ ಮಠದ ಸ್ವಾಮೀಜಿ ರಾಘವೇಶ್ವರ ಭಾರತಿ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿದೆ. ಮಹಿಳಾ ಆಯೋಗ ಈ ಪ್ರಕರಣದ ತನಿಖೆಗೆ ತನಿಖಾ ತಂಡವನ್ನು ನೇಮಿಸಿದ್ದು, ಒಂದೆರಡು ದಿನಗಳಲ್ಲಿ ತನಿಖಾ ತಂಡ ದೂರುದಾರರನ್ನು ಭೇಟಿ ನೀಡಿ ಮಹಿಳೆಯ ಜೊತೆ ಚರ್ಚಿಸಲಿದೆ.
ಲಲಿತಾ ಕುಮಾರಮಂಗಳಂ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡು ಕೇವಲ ಮೂರುದಿನಗಳಲ್ಲಿ ಈ ಬೆಳವಣಿಗೆ ಉಂಟಾಗಿದೆ. ಮಹಿಳೆಗೆ ಜೀವಬೆದರಿಕೆ ಹಾಕಿರುವ ಬಗ್ಗೆ ಮಾಹಿತಿಯನ್ನು ತನಿಖಾ ತಂಡ ಕಲೆಹಾಕಲಿದ್ದು, ರಾಜ್ಯ ಮಹಿಳಾ ಆಯೋಗಕ್ಕೆ ವರದಿ ಸಲ್ಲಿಸಲಿದೆ.