ಪುಲ್ವಾಮಾ ಘಟನೆಗೆ ಖಂಡನೆ: ವರ್ತಕರಿಂದ ವಹಿವಾಟು ಬಂದ್

ಸೋಮವಾರ, 18 ಫೆಬ್ರವರಿ 2019 (15:08 IST)
ಪುಲ್ವಾಮಾದಲ್ಲಿ ಸೈನಿಕರ ಮೇಲೆ ಉಗ್ರರು ನಡೆಸಿದ ದಾಳಿಗೆ ಖಂಡನೆ ಮುಂದುವರಿದಿದೆ.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ವ್ಯಾಪಾರಸ್ಥರು ಉಗ್ರರ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಾಪಾರ ವಹಿವಾಟು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಅಂಗಡಿ ಮುಗ್ಗಟ್ಟು ಬಂದ್ ಮಾಡಿದ ವ್ಯಾಪಾರಸ್ಥರು, ಅಗಲಿದ ವೀರ ಯೋಧರಿಗೆ ನಮನ ಸಲ್ಲಿಸಿದರು.

ವ್ಯಾಪಾರಸ್ಥರ ಸಂಘ ಹಾಗೂ ಇತರ ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿದ್ದವು. ಉಗ್ರರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಕೇಂದ್ರಕ್ಕೆ ಒತ್ತಾಯ ಮಾಡಲಾಯಿತು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ