ಸಿದ್ದಾರ್ಥ ಅಳಿಯನಲ್ಲ ಮಗ ಅಂತ ಸಿದ್ದರಾಮಯ್ಯ ಹೇಳಿದ್ಯಾಕೆ?

ಬುಧವಾರ, 31 ಜುಲೈ 2019 (12:20 IST)
ಮಾಜಿ ಸಿಎಂ ಎಸ್.ಎಂ.ಕೃಷ್ಣರ ಅಳಿಯ ಸಿದ್ದಾರ್ಥ ಹೆಗಡೆ ಸಾವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ ಒಳ್ಳೆಯ ಉದ್ಯಮಿಯಾಗಿದ್ದರು. ಎಸ್.ಎಂ ಕೃಷ್ಣ ಅವರ ಅಳಿಯನಾಗಿರದೇ ಮಗನೇ ಆಗಿದ್ದರು. ಅವರ ಅಗಲಿಕೆ ನೋವು ತಂದಿದೆ ಎಂದ್ರು.

ವಿ.ಜಿ.ಸಿದ್ದಾರ್ಥ್ ಸಾವು ಅನಿರೀಕ್ಷಿತವಾಗಿದ್ದು, ಇದರಿಂದ ಆಘಾತವಾಗಿದೆ ಎಂದಿದ್ದಾರೆ.  ಅವರ ಕುಟುಂಬಕ್ಕೆ ಸಿದ್ದಾರ್ಥ ಅಗಲಿಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದಿದ್ದಾರೆ.

ನೇತ್ರಾವತಿ ಸೇತುವೆ ಬಳಿ ಕಾಣೆಯಾಗಿದ್ದ ಸಿದ್ದಾರ್ಥ ಮೀನುಗಾರರಿಗೆ ಶವವಾಗಿ ಪತ್ತೆಯಾಗಿದ್ದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ