ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯ ಕಡೆಗಣನೆ- ಆಕ್ರೋಶ

ಶನಿವಾರ, 10 ಫೆಬ್ರವರಿ 2018 (12:12 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಭೇಟಿಗೆ ಸ್ವಾಗತಿಸುವ ಬ್ಯಾನರಿನಲ್ಲಿ ಮಾದಿಗ ಸಮುದಾಯದ ಮುಖಂಡರ ಭಾವಚಿತ್ರ ಹಾಕದಿರುವುದಕ್ಕೆ ಸಾಮಾಜಿಕ  ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಸಚಿವ ಎಚ್.ಆಂಜನೇಯ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ  ಅವರ ಭಾವಚಿತ್ರಗಳನ್ನು ಬ್ಯಾನರ್ ಗಳಲ್ಲಿ ಅಳವಡಿಸಿಲ್ಲ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಮಾದಿಗ ಸಮುದಾಯವನ್ನು ಕಾಂಗ್ರೆಸ್ ಕಡೆಗಣಿಸಿದ್ದು, ಮಾದಿಗ ಸಮುದಾಯದವರಿಗೆ ಅನ್ಯಾಯ  ಮಾಡಲಾಗಿದೆ ಎಂದು ಹಲಗೇರಿ ಜಿಲ್ಲಾ ಪಂಚಾಯಿತಿ ಸದಸ್ಯ ಗೂಳಪ್ಪ  ವಾಟ್ಸಪ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ