ಗ್ಯಾರಂಟಿ ಯೋಜನೆಗೆ ಷರತ್ತು ಪ್ರಕಟಿಸಿದ ಕಾಂಗ್ರೆಸ್

ಶುಕ್ರವಾರ, 20 ಜನವರಿ 2023 (16:02 IST)
ಬೆಂಗಳೂರು : 200 ಯೂನಿಟ್ ಉಚಿತ ವಿದ್ಯುತ್ ಮತ್ತು ಮನೆಯ ಗೃಹಿಣಿಗೆ ಉಚಿತ 2 ಸಾವಿರ ರೂ. ನೀಡುವ ಯೋಜನೆ ಪ್ರಕಟಿಸಿದ್ದ ಕರ್ನಾಟಕ ಕಾಂಗ್ರೆಸ್ ಈಗ ಷರತ್ತು ವಿಧಿಸಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ, ಪರಿಷತ್ ಪ್ರತಿಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಆದಾಯ ತೆರಿಗೆ ಕಟ್ಟುವವರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಉಚಿತ ವಿದ್ಯುತ್ ನೀಡುತ್ತೇವೆ. ಎಲ್ಲಾ ಹೆಣ್ಣು ಮಕ್ಕಳಿಗೆ 2 ಸಾವಿರ ರೂ. ನೀಡುವುದಿಲ್ಲ. ಒಂದು ಕುಟುಂಬದ ಓರ್ವ ಯಜಮಾನಿಗೆ ಮಾತ್ರ 2 ಸಾವಿರ ರೂ. ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಗುಂಡೂರಾವ್ ಅವರು ಈ ಹಿಂದೆಯೇ ರೈತರ ಪಂಪ್ಸೆಟ್ಗೆ ಉಚಿತ ವಿದ್ಯುತ್ ನೀಡಿದ್ದರು. ಈಗ ಹಣ ಇರುವುದರಿಂದಲೇ ಯೋಜನೆ ಮಾಡುತ್ತಿದ್ದೇವೆ. ನಮಗೆ ಕೊಡಲು ಸಾಧ್ಯವಾಗುತ್ತದೆ ಎಂಬ ಕಾರಣಕ್ಕೆ ಭರವಸೆ ನೀಡಿದ್ದೇವೆ ಎಂದು ಕಾಂಗ್ರೆಸ್ ಯೋಜನೆಯನ್ನು ಹರಿಪ್ರಸಾದ್ ಸಮರ್ಥಿಸಿಕೊಂಡರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ