ಇಂದಿನಿಂದ ಹೊಸಕೋಟೆಯಲ್ಲಿ ಕಾಂಗ್ರೆಸ್ ನ ಪ್ರಭಾವಿ ನಾಯಕರಿಂದ ಭರ್ಜರಿ ಪ್ರಚಾರ

ಭಾನುವಾರ, 24 ನವೆಂಬರ್ 2019 (11:03 IST)
ಹೊಸಕೋಟೆ : ಡಿಸೆಂಬರ್ 5 ರಂದು ಹೊಸಕೋಟೆ ಉಪಚುನಾವಣೆಯ ಹಿನ್ನಲೆಯಲ್ಲಿ ಇಂದಿನಿಂದ ಕಾಂಗ್ರೆಸ್ ನ ಪ್ರಭಾವಿ ನಾಯಕರು ತಮ್ಮ ಅಭ್ಯರ್ಥಿಯ ಪರ ಭರ್ಜರಿ ಪ್ರಚಾರ ಮಾಡಲಿದ್ದಾರೆ.



ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಪರ ಇಂದು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮತಯಾಚನೆ ಮಾಡಲಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರಿಗೆ ಶಾಕ್ ನೀಡಲಿದ್ದಾರೆ ಎನ್ನಲಾಗಿದೆ.

 

ಈ ಬಗ್ಗೆ ಮಾತನಾಡಿದ ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್, ಸಿದ್ದರಾಮಯ್ಯ, ಡಿಕೆಶಿ ಅವರ ಪ್ರಚಾರ ಅವರು ಮಾಡಲಿ. ಕಾಂಗ್ರೆಸ್  ಗೆ ಅವರು ಬಿಜೆಪಿಗೆ ನಾವು ಪ್ರಚಾರ ಮಾಡ್ತೇವೆ. ಗೆಲ್ಲಿಸುವುದು ಸೋಲಿಸುವುದರ ಬಗ್ಗೆ ಜನರು ನಿರ್ಧರಿಸ್ತಾರೆ ಎಂದು ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ