ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್ ಕೆ ರಮೇಶ್ ಮತಯಾಚನೆ

ಸೋಮವಾರ, 8 ಮೇ 2023 (15:00 IST)
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್ ಕೆ ರಮೇಶ್ ಮತಯಾಚನೆ ಮಾಡಿದ್ರು. ಮಾಜಿ ಸಚಿವ ಎಚ್ ಎಂ ರೇವಣ್ಣ ಕೂಡ ಸಾಥ್ ನೀಡಿದ್ರು. ಇಂದು ಬಹಿರಂಗ ‌ಮತಯಾಚನೆಗೆ ಕೊನೆಯ ದಿನವಾಗಿದ್ದು ಅಭ್ಯರ್ಥಿ ಗಳು ಭರ್ಜರಿ ಮರಯಾಚನೆ ನಡೆಸಿದ್ರು . ಚುಂಚಘಟ್ಟ, ಆರ್ ಬಿ ಐ ಲೇಔಟ್ , ಹೊಸರೋಡ್, ನಾಗನಾಥ ಪುರ,ಗೋವಿಂದ ಪುರ ಸೇರಿದಂತೆ ಹಲವು ಭಾಗಗಳಲ್ಲಿ ಮತಯಾಚನೆ ನಡೆಸಿದ್ರು. ನೂರಾರು ಕಾರ್ಯಕರ್ತರು ಬೈಕ್ಗಳಲ್ಲಿ‌ರ್ಯಾಲಿ ನಡೆಸಿದ್ರು. ಕಳೆದ ಬಾರಿ ಒಂದು ಲಕ್ಷಕ್ಕೂ ಅಧಿಕ ಮತಗಳನ್ನ ಪಡೆದಿದ್ದೆ. ದಯವಿಟ್ಟು ಈ ಬಾರಿ ನನ್ನನ್ನು ಗೆಲ್ಲಿಸಿ ಒಂದು ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು. ಇನ್ನೂ ಮಾಜಿ ಸಚಿವ ಹೆಚ್ ಎಂ ರೇವಣ್ಣ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ, ಜನ ಕೂಡ ಕಾಂಗ್ರೆಸ್ ಪಕ್ಷಕ್ಕೆ ಆರ್ಶಿವಾದ ಮಾಡ್ತಾರೆ ಎಂದ್ರು.
 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ