ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬುಧವಾರ, 26 ಏಪ್ರಿಲ್ 2023 (10:39 IST)
ನಮ್ಮ ಕಾಂಗ್ರೆಸ್ ನಾಯಕರು ನಮಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದರು.
 
ದೂರಿನಲ್ಲಿ ಏನಿದೆ?

ಮಾಜಿ ಐಪಿಎಸ್ ಆಗಿರುವ ಅಣ್ಣಾಮಲೈ ಈ ಹಿಂದೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಹಲವು ಪೊಲೀಸರ ಪರಿಚಯವಿದೆ. ಚುನಾವಣೆ ಸಮಯದಲ್ಲಿ ಬಹಳ ಮುಖ್ಯವಾದ ಹುದ್ದೆಯಲ್ಲಿ ಅಣ್ಣಾಮಲೈ ಅವರ ಪರಿಚಯಸ್ಥ ಬ್ಯಾಚ್ಮೇಟ್ಗಳು ಕರ್ತವ್ಯ ಮಾಡುತ್ತಿದ್ದಾರೆ. 

ಐಪಿಎಸ್ ಅಧಿಕಾರಿಗಳು, ಪೊಲೀಸರ ಪರಿಚಯ ಇರುವ ಕಾರಣ ಅಧಿಕಾರ ದುರ್ಬಳಕೆಯಾಗುವ ಸಾಧ್ಯತೆಯಿದೆ. ಅಣ್ಣಾಮಲೈ ಅವರು ರಾಜ್ಯವಾಪಿ ಓಡಾಟ ನಡೆಸುವುದರಿಂದ ಅವರ ವಾಹನದಲ್ಲಿ ಹಣ ಸಾಗಾಟ ಮಾಡುವ ಸಾಧ್ಯತೆಯಿದೆ.

ಇಲ್ಲಿಯವರೆಗೆ ಅವರ ವಾಹನವನ್ನು ಪರಿಶೀಲಿಸಿಲ್ಲ. ಈ ಕಾರಣಕ್ಕೆ ಚುನಾವಣೆ ಮುಗಿಯವವರೆಗೂ ಅವರ ಕರ್ನಾಟಕ ಪ್ರವಾಸಕ್ಕೆ ಅನುಮತಿ ನೀಡಿದ್ದನ್ನು ರದ್ದು ಪಡಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ