ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಜಿಲ್ಲೆಯ ಗುಡುಗೂರಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಾತನಾಡಿದ್ದು, ಸಿದ್ದರಾಮಯ್ಯ ಅವರು ಮೋದಿಯ ಹಾಗೆ ಸೂಟು ಬೂಟುಧಾರಿಯಲ್ಲ ಎಂದು ಹೊಗಳಿ ಅಟ್ಟಕ್ಕೇರಿಸಿದ್ದಾರೆ.
ಸಮಾವೇಶದಲ್ಲಿ ಮಾತನಾಡಿದ ರಾಹುಲ್, ರಾಷ್ಟ್ರದಲ್ಲಿ ರೈತರು ಸಾಲಬಾಧೆ, ಬೆಳೆ ಹಾನಿ, ಬೆಂಬಲ ಬೆಲೆ ಕುಸಿತ ಸೇರಿದಂತೆ ಇನ್ನಿತರೆ ಸಮಸ್ಯೆಗಳ್ನನು ಎದುರಿಸುತ್ತಿದ್ದರೂ ಕೂಡ ಮೋದಿ ಅವರು ಸೂಟು ಬೂಟು ಹಾಕಿಕೊಂಡು ವಿದೇಶಿ ಪ್ರವಾಸ ಮಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಹಾಗಲ್ಲ. ಮೋದಿ ತರ ಸೂಟು ಬೂಟು ಹಾಕುವ ಮನುಷ್ಯನಲ್ಲ, ರೈತ ಪರ ಕಾಳಜಿ ಹೊಂದಿರುವಂತಹ ವ್ಯಕ್ತಿ ಸಿದ್ದರಾಮಯ್ಯ ಎಂದು ಹೊಳಿದರು.