ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ಕಾಂಗ್ರೆಸ್ ಯುವರಾಜ

ಶನಿವಾರ, 10 ಅಕ್ಟೋಬರ್ 2015 (15:46 IST)
ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಜಿಲ್ಲೆಯ ಗುಡುಗೂರಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಾತನಾಡಿದ್ದು, ಸಿದ್ದರಾಮಯ್ಯ ಅವರು ಮೋದಿಯ ಹಾಗೆ ಸೂಟು ಬೂಟುಧಾರಿಯಲ್ಲ ಎಂದು ಹೊಗಳಿ ಅಟ್ಟಕ್ಕೇರಿಸಿದ್ದಾರೆ.
 
ಸಮಾವೇಶದಲ್ಲಿ ಮಾತನಾಡಿದ ರಾಹುಲ್, ರಾಷ್ಟ್ರದಲ್ಲಿ ರೈತರು ಸಾಲಬಾಧೆ, ಬೆಳೆ ಹಾನಿ, ಬೆಂಬಲ ಬೆಲೆ ಕುಸಿತ ಸೇರಿದಂತೆ ಇನ್ನಿತರೆ ಸಮಸ್ಯೆಗಳ್ನನು ಎದುರಿಸುತ್ತಿದ್ದರೂ ಕೂಡ ಮೋದಿ ಅವರು ಸೂಟು ಬೂಟು ಹಾಕಿಕೊಂಡು ವಿದೇಶಿ ಪ್ರವಾಸ ಮಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಹಾಗಲ್ಲ. ಮೋದಿ ತರ ಸೂಟು ಬೂಟು ಹಾಕುವ ಮನುಷ್ಯನಲ್ಲ, ರೈತ ಪರ ಕಾಳಜಿ ಹೊಂದಿರುವಂತಹ ವ್ಯಕ್ತಿ ಸಿದ್ದರಾಮಯ್ಯ ಎಂದು ಹೊಳಿದರು.  
 
ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರಂತೆ ಪ್ರತಿ ತಿಂಗಳೂ ಕೂಡ ಮನ್ ಕಿ ಬಾತ್ ಎಂದು ಹೇಳಿಕೊಂಡು ಭಾಷಣ ಮಾಡುವುದಿಲ್ಲ. ಆದರೆ ಪ್ರತಿನಿತ್ಯ ರೈತರೊಂದಿಗೆ ಬೆರೆತು ಅವರ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳುವವರಾಗಿದ್ದಾರೆ. ಪರಿಣಾಮ ಪರಿಹಾರದ ಮೊತ್ತವನ್ನು ಹೆಚ್ಚಿಸಿದ್ದಾರೆ ಎಂದರು. 

ರೈತರ ಆತ್ಮಹತ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಮೃತ ರೈತ ಕುಟುಂಬಕ್ಕೆ ನೀಡಬೇಕಿರುವ ಪರಿಹಾರದ ಮೊತ್ತವನ್ನು 2 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ