ಕಾಂಗ್ರೆಸ್ ಬಿಡಲು ನಟಿ ರಮ್ಯಾಗೆ ಪರೋಕ್ಷ ಸೂಚನೆ?!

ಶನಿವಾರ, 1 ಏಪ್ರಿಲ್ 2017 (12:16 IST)
ಮೈಸೂರು: ಉಪ ಚುನಾವಣೆಗಾಗಿ ಪ್ರಚಾರ ಮಾಡಲಿರುವ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಇತ್ತೀಚೆಗಷ್ಟೇ ಬಿಡುಗಡೆ ಮಾಡಿತ್ತು. ಆದರೆ ಇದರಲ್ಲಿ ಮಂಡ್ಯದ ಪ್ರಮುಖ ಕಾಂಗ್ರೆಸ್ ನಾಯಕಿ ನಟಿ ರಮ್ಯಾ ಅವರನ್ನು ಕೈ ಬಿಡಲಾಗಿದೆ.

 

ರಮ್ಯಾ ಬದಲು ಇತ್ತೀಚೆಗೆ ಮುಖ್ಯಮಂತ್ರಿ ಪುತ್ರ ಯತೀಂದ್ರಗೆ ಮಣೆ ಹಾಕಲಾಗುತ್ತಿದೆ. ಈ ಮೂಲಕ ರಮ್ಯಾರನ್ನು ಕಾಂಗ್ರೆಸ್ ದೂರವಿಡಲು ಪ್ರಯತ್ನಿಸುತ್ತಿದೆಯೇ ಎಂಬ ಅನುಮಾನಗಳಿಗೆ ರೆಕ್ಕೆ ಮೂಡಿದಂತಾಗಿದೆ.

 
ರಮ್ಯಾ ಅವರ ರಾಜಕೀಯ ಗುರು ಎಂದೇ ಪರಿಗಣಿಸಲಾಗಿದ್ದ ಎಸ್ ಎಂ ಕೃಷ್ಣ ಬಿಜೆಪಿ ಸೇರಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಮ್ಯಾ ಕೂಡಾ ಕೃಷ್ಣ ಬೆನ್ನಲ್ಲೇ ಬಿಜೆಪಿ ಸೇರುತ್ತಾರೆಂಬ ವದಂತಿಗಳಿತ್ತು. ಅದಕ್ಕೆ ಪುಷ್ಠಿ ನೀಡುವಂತೆ ರಮ್ಯಾ ಇತ್ತೀಚೆಗೆ ಕಾಂಗ್ರೆಸ್ ನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ