ರಾಜ್ಯದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಪ್ರವೃತ್ತಿ ಮುಂದಿವರಿದಿದೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಅಶ್ವಥ್ ನಾರಾಯಣ್ ಆರೋಪಿಸಿದರು. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡುತ್ತಿದ್ದ ಅವರು, ಜಿ.ಪಂ. ತಾ.ಪಂ ಚುನಾವಣೆ ವೇಳೆ ಹಣ ಹಂಚುವಾಗ ಹೆಬ್ಬಳ್ಳಿ ಜಿಪಂ ಕ್ಷೇತ್ರದ ಅಭ್ಯರ್ಥಿ ಯೋಗೀಶ್ ಗೌಡರಿಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಸಿಕ್ಕಿಬಿದ್ದಿದ್ದರು.