ರಾಜ್ಯದಲ್ಲಿ ಕಾಂಗ್ರೆಸ್‌ನದ್ದು ಲೂಟ್ ಸರ್ಕಾರ : ಪ್ರಹ್ಲಾದ್ ಜೋಷಿ

ಭಾನುವಾರ, 28 ಫೆಬ್ರವರಿ 2016 (14:26 IST)
ನಗರದಲ್ಲಿ ಆಯೋಜಿಸಲಾಗಿದ್ದ ಸ್ವಚ್ಚತಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯವನ್ನು ಲೂಟಿ ಹೊಡೆಯುವುದರಲ್ಲಿಯೇ ನಿರತವಾಗಿದೆ ಎಂದು ಆರೋಪಿಸಿದರು.
 
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಸರಕಾರ ರೈತ ವಿರೋಧಿ ನಿಲುವು ತಳೆದಿದೆ. ಕೇಂದ್ರ ಸರಕಾರ ರೈತರಿಗಾಗಿ ನೀಡಿದ ಆರ್ಥಿಕ ಅನುದಾನ ಸರಿಯಾಗಿ ಬಳಕೆ ಮಾಡಲು ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.
 
ಪ್ರತಿನಿತ್ಯ ಆರೋಪ ಪ್ರತ್ಯಾರೋಪಗಳಲ್ಲಿ ಮುಳುಗಿರುವ ಸರಕಾರಕ್ಕೆ ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಲು ಸಾಧ್ಯವಾಗುತ್ತಿಲ್ಲ. ಸ್ವಹಿತಾಸಕ್ತಿಯೇ ಮೇಲಾಗಿದೆ ಎಂದು ಕಿಡಿಕಾರಿದರು.

ವೆಬ್ದುನಿಯಾವನ್ನು ಓದಿ